ಪುತ್ತೂರು ಅಗ್ನಿಶಾಮಕ ಠಾಣಾಧಿಕಾರಿ ಸುಂದರ, ಪ್ರಮುಖ ಅಗ್ನಿಶಾಮಕ ರುಕ್ಮಯ್ಯ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ

0

ಪುತ್ತೂರು:ಪುತ್ತೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ವಿ.ಸುಂದರ್ ಮತ್ತು ಪ್ರಮುಖ ಅಗ್ನಿಶಾಮಕ ರುಕ್ಮಯ್ಯ ಗೌಡ ಇ. ಅವರು 2023ನೇ ಸಾಲಿನ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ಕರ್ತವ್ಯ ನಿಷ್ಠೆ ಮತ್ತು ಪ್ರಾಮಾಣಿಕತೆಯೊಂದಿಗೆ ದಕ್ಷ ಸೇವೆಗಾಗಿ ಇವರು ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.

ವಿ.ಸುಂದರ್ ಅವರು 2017ರಿಂದ ಮತ್ತು ರುಕ್ಮಯ್ಯ ಗೌಡ ಅವರು 2018ರಿಂದ ಪುತ್ತೂರು ಅಗ್ನಿ ಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಈಗಾಗಲೇ ಹಲವು ಪ್ರಕರಣಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಜನಮನ್ನಣೆ ಗಳಿಸಿದ್ದಾರೆ. ರುಕ್ಮಯ್ಯ ಗೌಡ ಅವರು ಈ ಹಿಂದೆ ಸುದ್ದಿ ಜನಾಂದೋಲನ ವೇದಿಕೆ ಮೂಲಕ ನಡೆದಿದ್ದ ಆನ್‌ಲೈನ್ ವೋಟಿಂಗ್‌ನಲ್ಲಿ ಅಗ್ನಿ ಶಾಮಕ ದಳದ ‘ಉತ್ತಮ ಅಧಿಕಾರಿ’ಯಾಗಿ ಜನರಿಂದ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here