ಬೆಳಂದೂರು ಸ. ಪ್ರ.ದರ್ಜೆ ಕಾಲೇಜಿನಲ್ಲಿ ದಿ. ಸಿ.ಪಿ ಜಯರಾಮ ಗೌಡರ ಪುಣ್ಯಸ್ಮರಣೆ ಕಾರ್ಯಕ್ರಮ

0

ಕಾಲೇಜಿನ ಅಭಿವೃದ್ಧಿಯಲ್ಲಿ ಸಿ.ಪಿ.ಜಯರಾಮ ಗೌಡರ ಕೊಡುಗೆ ಅಪಾರ- ಡಾ| ಶಂಕರ್ ಭಟ್
ಕಾಣಿಯೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ದಿ. ಸಿ.ಪಿ ಜಯರಾಮ ಗೌಡರ 6ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜೂ.28ರಂದು ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲಾರದ ಡಾ. ಶಂಕರ್ ಭಟ್ ಅವರು ಮಾತನಾಡಿ, ಕಾಲೇಜಿನ‌ ಸಂಸ್ಥಾಪನೆ ಮತ್ತು ಕಾಲೇಜಿನ ಅಭಿವೃದ್ಧಿಗಾಗಿ ದಿ. ಸಿ.ಪಿ.ಜಯರಾಮ ಗೌಡರ ಕೊಡುಗೆ ಅಪಾರ, ಜಯರಾಮ ಗೌಡರವರ ಅವರ ಕುಟುಂಬ ಇಂದಿನವರೆಗೂ ಕಾಲೇಜಿನ ಬೆಳವಣಿಗೆಯಲ್ಲಿ ಸಹಕರಿಸುತ್ತಿರುವುದು ಶ್ಲಾಘನೀಯ ಎಂದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಪ್ರೊ.ವೆಂಕಟೇಶ ಪ್ರಸನ್ನ ಪಿ.ಕೆ ಉಪಸ್ಥಿತರಿದ್ದರು. ಉಪನ್ಯಾಸಕ ಸ್ವಾಮಿ.ಎಸ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here