ಅನ್ನಭಾಗ್ಯ ಯೋಜನೆ: ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ

0

ಪುತ್ತೂರು/ ಮಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ನೀಡಬೇಕಿರುವ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೂನ್ 28ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 1 ರಿಂದಲೇ ಫಲಾನುಭವಿಗಳ ( ಬಿಪಿಎಲ್ ಕಾರ್ಡ್ ದಾರರಿಗೆ ) ಬ್ಯಾಂಕ್
ಖಾತೆಗಳಿಗೆ ಹಣ ಜಮಾವಣೆ ಮಾಡಲು ನಿರ್ಧರಿಸಲಾಗಿದೆ.

LEAVE A REPLY

Please enter your comment!
Please enter your name here