ಪುತ್ತೂರು:ಶಿಕ್ಷಕಿಯರಿಗೆ ಮಾಹಿತಿ ಕಾರ್ಯಗಾರ

0

ಪುತ್ತೂರು; ಶ್ರೀ.ಕ್ಷೇತ್ರ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ದಕ್ಷಿಣ ಕನ್ನಡ -2 ಜಿಲ್ಲಾ ವ್ಯಾಪ್ತಿಯ ಪುತ್ತೂರು,ಸುಳ್ಯ,ಕಡಬ,ವಿಟ್ಲ ತಾಲೂಕುಗಳಿಗೆ ಸಮುದಾಯ ಅಭಿವೃದ್ಧಿ ವಿಭಾಗದಿಂದ 88 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿಯಾಗಿದ್ದು ಈ ನಿಟ್ಟಿನಲ್ಲಿ ಆಯ್ಕೆಗೊಂಡ ಶಿಕ್ಷಕಿಯರಿಗೆ ಮಾಹಿತಿ ಕಾರ್ಯಗಾರವನ್ನು ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ -2 ವ್ಯಾಪ್ತಿಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್,ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಶೇಖರ್,ಪುತ್ತೂರು ತಾಲೂಕು ಕ್ಷೇತ್ರ ಯೋಜನಾಧಿಕಾರಿ ಶಶಿಧರ್ ಎಂ ಉಪಸ್ಥಿತರಿದ್ದರು.ಜಿಲ್ಲಾ ಪ್ರಬಂಧಕರಾದ ಉಪೇಂದ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here