![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ಕಳೆದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಜೂ.29ರಂದು ನಡೆಯಿತು.
ಕಳೆಂಜ ಶಾಖೆ ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಅವರು ಗಿಡವನ್ನು ನೆಡುವ ಮೂಲಕ ಉದ್ಘಾಟಿಸಿದರು. ಯುವ ಜೇಸಿಯ ದೀಕ್ಷಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜೆಸಿಂತಾ ಡಿ ಸೋಜ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಶ್ರವಣ್ ಜೇಸಿ ವಾಣಿ ವಾಚಿಸಿದರು. ಆಡಳಿತ ಸಮಿತಿಯ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್ ಸ್ವಾಗತಿಸಿದರು. ಹಿರಿಯ ಜೇಸಿ ಜೋಸೆಫ್ ಪಿರೇರಾ ಅತಿಥಿಗಳನ್ನು ಪರಿಚಯಿಸಿದರು. ಸೌಂದರೀಕರಣ, ಔಷಧೀಯ ಸಸ್ಯಗಳು ಸೇರಿದಂತೆ 27 ವಿಧದ 50 ಗಿಡಗಳನ್ನು ನೆಡಲಾಯಿತು.
![](https://puttur.suddinews.com/wp-content/uploads/2023/06/kalenja-2.jpg)
ಜೇಸಿ ಸದಸ್ಯರಾದ ಸಂತೋಷ ಕುಮಾರ್ ಜೈನ್, ಅಕ್ಷತ್ ರೈ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ, ಕೇಶವ ಗೌಡ ದರ್ಖಾಸು, ವಸಂತ ಪೂಜಾರಿ, ರುಕ್ಮಯ ಗೌಡ, ಕೇಶವ ಗೌಡ ಮಲ್ಲಜಾಲು, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮುರಳೀಧರ, ಗೋಪಾಲಕೃಷ್ಣ ನೇರೆಂಕಿ ಪಾಲ್, ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್, ಇಂದಿರಾ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕೃಪಾ ವಂದಿಸಿದರು.
![](https://puttur.suddinews.com/wp-content/uploads/2023/06/kalenja-3.jpg)