ವಾಮಾಚಾರ ಮಾಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಸಂದೇಶ ರವಾನೆ ಆರೋಪ – ಮುರಳಿಕೃಷ್ಣ ಹಸಂತಡ್ಕರಿಂದ ದೂರು

0

ಮಾನಹಾನಿ ಸಂದೇಶ ರವಾನೆ ಮಾಡಿದವರಿಗೆ ಸದ್ಬುದ್ದಿ ನೀಡಲೆಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಚುನಾವಣೆ ಸಂದರ್ಭ ಅರುಣ್ ಕುಮಾರ್ ಪುತ್ತಿಲರ ಮೇಲೆ ವಾಮಾಚಾರ ಹೋಮ ಮಾಡಿಸಿದ್ದಾರೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲೆ ಆರೋಪ ಮಾಡಿ ಆಧಾರ ರಹಿತವಾಗಿ ಮಾನಹಾನಿ ಸಂದೇಶ ರವಾನಿಸುತ್ತಿರುವ ಆರೋಪಿಗಳಿಗೆ ಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ಕಾನೂನು ಕ್ರಮ‌ಕೈಗೊಳ್ಳುವಂತೆ ಪುತ್ತೂರು ಪೊಲೀಸರಿಗೆ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ದೂರು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಜೂ.30ರಂದು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಸಂದೇಶ ರವಾನೆ ಮಾಡುತ್ತಿರುವವರಿಗೆ ಸದ್ಬುದ್ದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here