ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ – ಪತಿ ಮೃತ್ಯು – ಪತ್ನಿಯ ಸ್ಥಿತಿ ಗಂಭೀರ

0

ಪುತ್ತೂರು : ಅನಂತಾಡಿಯ ಬಾಕಿಲ ಎಂಬಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು , ಪತಿ ಮೃತಪಟ್ಟು ಪತ್ನಿಯನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತಾಡಿ ಬಾಕಿಲ ನಿವಾಸಿ ಪ್ರತಾಪ್( 35) ಮೃತಪಟ್ಟಿದ್ದು ಪತ್ನಿ ವೀಣಾ( 32 )ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು , ತಕ್ಷಣ ಮಾಹಿತಿ ತಿಳಿದು ಇಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ಕರೆ ತರಲಾಗಿತ್ತು.ಆದರೆ ಪ್ರತಾಪ್ ಮೃತಪಟ್ಟಿದ್ದಾರೆ. ಪತ್ನಿ ವೀಣಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಪ್ರತಾಪ್ ಖಾಸಗಿ ಬಸ್ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here