ರೋಟರಿ ಕ್ಲಬ್ ಈಸ್ಟ್ ನಿಂದ ಕೃತಜ್ಞತಾ ಕಾರ್ಯಕ್ರಮ

0

ಪುತ್ತೂರು: ಅಂತರ್ರಾಷ್ಟ್ರೀಯ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ವತಿಯಿಂದ ಕ್ಲಬ್ಬಿನ ಒಂದು ವರ್ಷದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಂತಹ ಕ್ಲಬ್ಬಿನ ಎಲ್ಲಾ ಸದಸ್ಯರನ್ನು ಗುರುತಿಸುವ ಕೃತಜ್ಞತಾ ಸಭೆಯು ಜೂ.28 ರಂದು ಮನೀಷಾ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ರೋಟರಿ ಜಿಲ್ಲಾ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಸ್ಥಾಪಕ ಅಧ್ಯಕ್ಷ ರತ್ನಾಕರ ಶೆಣೈ ಕೆ ಇವರುಗಳಿಗೆ ಎಲ್ಲಾ ಸದಸ್ಯರ ಪರವಾಗಿ ಗೌರವಿಸಲಾಯಿತು. ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿಗೊಂಡ ಸುರೇಶ್ ರೈ ಅವರಿಗೆ ವೃತ್ತಿ ಸೇವಾ ವಿಭಾಗದ ಗೌರವವನ್ನು ನೀಡಲಾಯಿತು. ಕ್ಲಬ್ಬಿನ ಅಧ್ಯಕ್ಷರಾದ ಶರತ್ ಕುಮಾರ್ ರೈ ತನ್ನ ಸದಸ್ಯರಿಗೆ ಸ್ಮರಣೆಕೆ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಅಸಿಸ್ಟೆಂಟ್ ಗವರ್ನರ್ ಎ.ಜೆ ರೈ, ವಲಯ ಸೇನಾನಿ ಪುರಂದರ ರೈ, ನಿಯೋಜಿತ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ಉಪಸ್ಥಿತರಿದ್ದರು.
ಕು.ಭಾಮಿನಿ ಪ್ರಾರ್ಥಿಸಿದರು. ಕಾರ್ಯದರ್ಶಿ ಶಶಿಕಿರಣ್ ರೈ ನೂಜಿ ವಂದಿಸಿದರು.

LEAVE A REPLY

Please enter your comment!
Please enter your name here