ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಸಂಘದ ಉದ್ಘಾಟನಾ ಸಮಾರಂಭ

0

ಪುತ್ತೂರು: ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಸಂಘದ ಉದ್ಘಾಟನಾ ಸಮಾರಂಭ ಜೂನ್ 26ರಂದು ನಡೆಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ್ ರೈ ದೀಪ ಬೆಳಗಿಸುವುದರ ಮೂಲಕ ಸಂಘದ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಶಾಲಾ ಸಂಘಗಳ ಜವಾಬ್ದಾರಿ ಮತ್ತು ಚಟುವಟಿಕೆಗಳು ಹಾಗೂ ಶಾಲೆಯ ಅಭಿವೃದ್ಧಿಯ ಬಗ್ಗೆ, ಪೋಷಕರ ಸಹಕಾರ ಇದರ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ಉಪಸ್ಥಿತರಿದ್ದರು .ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಬರಕ್ಕೆರೆ ಸೀತಾರಾಮ್ ಭಟ್,ಸಂಚಾಲಕ ಸರ್ವೋತ್ತಮ್ ಬೋರ್ಕರ್, ನಿರ್ದೇಶಕ ಕೃಷ್ಣಪ್ಪ ಗೌಡ, ರಾಧಾಕೃಷ್ಣ ಭಂಡಾರಿ, ಶಾಲೆಯ ಮುಖ್ಯ ಗುರುಗಳಾದ ವನಿತಾ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಶಿಕ್ಷಕಿ ಕೃಷ್ಣವೇಣಿ ,ಧನ್ಯವಾದವನ್ನು ಶಿಕ್ಷಕಿ ಪ್ರತಿಮಾ ಹಾಗೂ ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕಿ ಸುಪ್ರಭಾ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here