ಶಿರಾಡಿ: ಪರಿಸರ ಜಾಗೃತಿ, ಗಿಡ ನಾಟಿ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಳಪಾರು ಮತ್ತು ಅರಣ್ಯ ಇಲಾಖೆ ಶಿರಾಡಿ ಶಾಖೆ ಆಶ್ರಯದಲ್ಲಿ ಶಿರಾಡಿ ಗ್ರಾಮದ ಕಳಪಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಜು.2ರಂದು ನಡೆಯಿತು.


ಶಿರಾಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಧೀರಜ್ ಎಸ್., ಉದ್ಘಾಟಿಸಿ ಮಾತನಾಡಿ, ಇಲಾಖೆಯ ವತಿಯಿಂದ ಜುಲೈನಲ್ಲಿ ಸಸಿ ನೆಡುವ ಕಾರ್ಯಕ್ರಮ ‘ನಮ್ಮ ಗಿಡ ನಮ್ಮ ಹೆಮ್ಮೆ’ ಎಂಬ ಧ್ಯೇಯದೊಂದಿಗೆ ರಾಜ್ಯಾದ್ಯಾಂತ ಆಚರಿಸಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ ವಲಯದ ಅಧ್ಯಕ್ಷ ಕುಶಾಲಪ್ಪ ರವರು ಶುಭ ಹಾರೈಸಿದರು. ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಮಾತನಾಡಿ, ಪರಿಸರ ಉಳಿಸುವ ಹೊಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.


ಗಸ್ತು ಅರಣ್ಯಪಾಲಕ ಸುನಿಲ್ ನಾಯ್ಕ್, ಜನಜಾಗೃತಿ ವೇದಿಕೆ ಸದಸ್ಯರಾದ ತುಕಾರಾಮ್, ಕೃಷಿ ಮೇಲ್ವಿಚಾರಕ ಸೋಮೇಶ್, ದೇವಸ್ಥಾನದ ಅರ್ಚಕ ಪ್ರಶಾಂತ್, ಕಳಪಾರು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ವಿಜೇಶ್ ಪ್ರಸ್ತಾವಿಸಿದರು. ಪದಾಧಿಕಾರಿ ಅಣ್ಣು ಸ್ವಾಗತಿಸಿ, ಸೇವಾಪ್ರತಿನಿಧಿ ವಿದ್ಯಾಲಕ್ಷ್ಮಿ ನಿರೂಪಿಸಿದರು.

LEAVE A REPLY

Please enter your comment!
Please enter your name here