![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು:ಹಾರಾಡಿಯಿಂದ ರೈಲ್ವೇ ನಿಲ್ದಾಣದ ತನಕ ನಗರಸಭೆಯಿಂದ ನಡೆಯುತ್ತಿರುವ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದರೂ ರೈಲ್ವೇ ಇಲಾಖೆಯಿಂದ ಸೇತುವೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕೇಂದ್ರ ದಿಶಾ ನಾಮ ನಿರ್ದೇಶಿತ ಸದಸ್ಯ ರಾಮದಾಸ್ ಹಾರಾಡಿಯವರು ದಿಶಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಜು.1ರಂದು ದ.ಕ ಜಿ.ಪಂ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಕೇಂದ್ರ ಸಮನ್ವಯ ಮತ್ತು ಉಸ್ತುವಾರಿ(ದಿಶಾ) ಸಮಿತಿ ಸಭೆಯಲ್ಲಿ ಅವರು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಾನಂದ್ ಅಂಚನ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/07/8c2c0dec-05f9-49e4-8fc5-5f6b786399a2.jpg)