ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿ ಬಂಧನ

0

ಪುತ್ತೂರು:ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಯ್ಯೂರು ಕಟ್ಟತ್ತಾರು ನಿವಾಸಿ ಮಹಮ್ಮದ್ ಅಶ್ರಫ್(31ವ)ರವರು ಬಂಧಿತ ಆರೋಪಿ. ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿದ್ದ ವ್ಯಕ್ತಿಯ ಕುರಿತು ಬಂದ ಮಾಹಿತಿಯಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಆರೋಪಿ ಮಹಮ್ಮದ್ ಅಶ್ರಫ್‌ತನನ್ನು ವಿಚಾರಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದರು. ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here