ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಭಕ್ತಕೋಡಿ ಸ.ಹಿ.ಪ್ರಾ ಶಾಲಾ ಮಕ್ಕಳಿಗೆ ಅಗತ್ಯವಿದ್ದ ಕ್ರೀಡಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.
![](https://puttur.suddinews.com/wp-content/uploads/2023/07/330600de-3bba-4ee9-9e1e-9acc2c86556a.jpg)
ಯುವಕ ಮಂಡಲದ ಅಧ್ಯಕ್ಷ ಗೌತಮ್ರಾಜ್ ಕರುಂಬಾರು ಕ್ರೀಡಾ ಸಾಮಾಗ್ರಿಗಳನ್ನು ಶಾಲಾ ಮುಖ್ಯ ಗುರು ಗೀತಾರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಉಪಾಧ್ಯಕ್ಷ ಅಶೋಕ್ ಎಸ್.ಡಿ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳ, ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಎಸ್.ವಿ, ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯ ಲಕ್ಷ್ಮಣ ಆಚಾರ್ಯ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.