ಜು 8- ಕಾಣಿಯೂರಿನಲ್ಲಿ ಪತ್ರಿಕಾ ದಿನಾಚರಣೆ- ಸಾಧಕರಿಗೆ ಸನ್ಮಾನ – “ಎಸೆಸ್ಸೆಲ್ಸಿ ನಂತರದ ಶೈಕ್ಷಣಿಕ ಅವಕಾಶಗಳು” ವಿಶೇಷ ಉಪನ್ಯಾಸ

0

ಕಾಣಿಯೂರು: ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಗಳ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಜುಲೈ 8 ರಂದು ನಡೆಯಲಿದೆ.

ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗಳ ಸಂಚಾಲಕ ಜಯಸೂರ್ಯ ರೈ ಮಾದೋಡಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ| ಧರ್ಮಪಾಲ ಕರಂದ್ಲಾಜೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಳ್ಳಾರೆ ಸರಕಾರಿ ಪ.ಪೂ.ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಸೂರ್ಯನಾರಾಯಣ ಬಿ.ವಿ ಅವರು ಎಸೆಸ್ಸೆಲ್ಸಿ ನಂತರದ ಶೈಕ್ಷಣಿಕ ಅವಕಾಶಗಳು ವಿಷಯದ ಕುರಿತು ವಿಶೇಷ ಉಪನ್ಯಾಸ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಗತಿ ವಿದ್ಯಾಸಂಸ್ಥೆಗಳ ಸಂಚಾಲಕ ಜಯಸೂರ್ಯ ರೈ ಮಾದೋಡಿ , ಕಾಣಿಯೂರಿನ ಹಿರಿಯ ಪತ್ರಿಕಾ ವಿತರಕರಾದ ಅನಂತರಾಮ ಉಪಾಧ್ಯಾಯ ತುಂಬ್ಯ , ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ ಪಡೆದ ಉತ್ತಮ್ ಕಾಣಿಯೂರು ಇವರಿಗೆ ಸನ್ಮಾನ ನಡೆಯಲಿದೆ ಎಂದು ಕಡಬ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here