ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಗುರುಪೂರ್ಣಿಮೆ ಮಹೋತ್ಸವ

0

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಜು.3 ರಂದು ಗುರು ಪೂರ್ಣಿಮೆಯ ಪ್ರಯುಕ್ತ ಶಾಲಾ ಮಕ್ಕಳಿಂದ ಗುರುವಂದನಾ ಕಾರ್ಯಕ್ರಮ ಆಚರಿಸಲಾಯಿತು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ಮನೋಹರ ರೈ ಜಂಟಿ ದೀಪ ಪ್ರಜ್ವಲನೆ ಮಾಡಿ ಪುಷ್ಪಾರ್ಚನೆ ಮಾಡಿದರು. ಬಳಿಕ ಮಕ್ಕಳು ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿ, ತಮ್ಮ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿ ಮನೋಹರ ರೈ ಹಾಗೂ ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಎ.ವಿ ನಾರಾಯಣ, ಗಂಗಾಧರ ಗೌಡ ಎ.ವಿ, ಉಪಾಧ್ಯಕ್ಷ ಉಮೇಶ್ ಮಲುವೇಲು, ಕೋಶಾಧಿಕಾರಿ ವಾಮನ ಎ.ವಿ. ಎವಿಜಿ ಎಜುಕೇಶನ್ ಅಂಡ್ ಚಾರಿ ಟೇಬಲ್ ಕಾರ್ಯದರ್ಶಿ ಪ್ರತಿಭಾ ದೇವಿ ಹಾಗೂ ಸಂಸ್ಥೆಯ ಸಹಾಯಕರಾದ ನಾರಾಯಣ ಕುಲಾಲ್ ಮತ್ತು ಭುವನೇಶ್ವರಿ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ವನಿತಾ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲ ಉಷಾ ಕಿರಣ ಕೆ.ಎಸ್ ಸ್ವಾಗತಿಸಿದರು. ಎವಿಜಿ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರತಿಭಾ ದೇವಿಯವರು ವಂದಿಸಿದರು. ಸಂಸ್ಥೆಯ ಸಹ ಶಿಕ್ಷಕಿ ಯಶುಭ ರೈ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here