ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ವನಮಹೋತ್ಸವ

0

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಜೂ.30ರಂದು ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಹಾಗೂ ಮುಖ್ಯ ಅತಿಥಿ ನಗರಸಭೆ ಸದಸ್ಯೆ ಗೌರಿ ಬನ್ನೂರು ವನಮಹೋತ್ಸವದ ಮಹತ್ವವನ್ನು ವಿವರಿಸಿ ಪುಟಾಣಿ ಮಕ್ಕಳ ಕೈಯಲ್ಲಿ ಗಿಡವನ್ನು ನೆಡಿಸಿ ವನಮಹೋತ್ಸವವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಎ.ವಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಲುವೇಲು, ಆಡಳಿತ ಮಂಡಳಿಯ ಸದಸ್ಯ ಸೀತಾರಾಮ ಪೂಜಾರಿ ಮೇಲ್ಮಜಲು, ಎವಿಜಿ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷೆ ಪುಷ್ಪವತಿ ಕಳುವಾಜೆ, ಪ್ರಧಾನ ಕಾರ್ಯದರ್ಶಿಯಾದ ಪ್ರತಿಭಾ ದೇವಿ, ಕಾನೂನು ಸಲಹೆಗಾರದ ದೀಕ್ಷಾ, ಹಾಗೂ ಸಂಸ್ಥೆಯ ಸಹಾಯಕರಾದ ನಾರಾಯಣ ಕುಲಾಲ್ ಮತ್ತು ಭುವನೇಶ್ವರಿ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹ ಶಿಕ್ಷಕಿ ಯಶುಭ ರೈ ಇವರು ಪ್ರಾರ್ಥಿಸಿದರು. ಪ್ರಾಂಶುಪಾಲೆ ಉಷಾ ಕಿರಣ ಕೆ.ಎಸ್ ಸ್ವಾಗತಿಸಿದರು, ಸಂಚಾಲಕ ಎ.ವಿ ನಾರಾಯಣರವರು ವಂದಿಸಿದರು. ಸಂಸ್ಥೆಯ ಸಿಬ್ಬಂದಿ ವನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here