ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಪ್ರಧಾನಿ ಮೋದಿ ಅವರ 9ವರ್ಷದ ಸಾಧನೆ- ಮಹಾ ಸಂಪರ್ಕ ಅಭಿಯಾನ

0

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿ ಜೀ ರವರ 9ವರ್ಷ ದ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 9 ನೇ ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ಮಂಡಲದ ಅಧ್ಯಕ್ಷರು ಅಪ್ಪಯ್ಯ ಮಣಿಯಾಣಿ, ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಮೀನಾಕ್ಷಿ ಮಂಜುನಾಥ್, ಉಷಾ ಚಂದ್ರ ಮುಳಿಯ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಯುವರಾಜ್ ಕೆ ಪೆರಿಯಾತ್ತೋಡಿ, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರು ರಾಧಾಕೃಷ್ಣ ಬೋರ್ಕರ್ ಹಾಗೂ ಮಂಡಲದ ಪದಾಧಿಕಾರಿಗಳು,ಮೋರ್ಚಾ- ಪ್ರಕೋಷ್ಟ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಭಾಗವಹಿಸಿದರು.

LEAVE A REPLY

Please enter your comment!
Please enter your name here