ಇದು ತೋಡಲ್ಲ….ಕುರಿಯದ ರೋಡು…! – ಚರಂಡಿಯಿಲ್ಲದೆ ಜಲಾವೃತಗೊಂಡು ತೋಡಿನಂತಾದ ರಸ್ತೆ

0

ಪುತ್ತೂರು: ಪಂಜಲ-ಪರ್ಪುಂಜ ಸಂಪರ್ಕ ರಸ್ತೆಯ ಆರ್ಯಾಪು ಗ್ರಾ.ಪಂ ವ್ಯಾಪ್ತಿಯ ಕುರಿಯ ರಸ್ತೆಯ ಬದಿಯಲ್ಲಿ ಸಮರ್ಪಕ ಚರಂಡಿಯಿಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು ರಸ್ತೆ ತೋಡಿನಂತಾಗಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಪರಡಾಡುವಂತಾಗಿದೆ.

ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ಸಮರ್ಪಕ ನಿರ್ವಹಣೆಯಿಲ್ಲದೆ ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಗೆ ನುಗ್ಗಿದೆ. ಪರಿಣಾಮವಾಗಿ ರಸ್ತೆ ಸಂಪೂರ್ಣವಾಗಿ ಕೆಂಪು ನೀರಿನಿಂದ ಆವೃತಗೊಂಡು ಸಂಚಾರ ಅಸ್ತವ್ಯಸ್ತವಾಗಿದೆ.

ಮೊದಲೇ ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಈಗ ಮಳೆ ನೀರು ತುಂಬಿಕೊಂಡಿದ್ದು ರಸ್ತೆಯಲ್ಲಿ ಸಂಚರಿಸುವವರು ಸಂಕಷ್ಟು ಪಡುತ್ತಿದ್ದಾರೆ. ಸಂಬಂಧಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here