ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣದ ಆರೋಪಿ; ತಹಸಿಲ್ದಾರ್ ಅಜಿತ್ ರೈ ನ್ಯಾಯಾಂಗ ಕಸ್ಟಡಿಗೆ

0

ಬೆಂಗಳೂರುದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೆ.ಆರ್.ಪುರಂ ತಹಸಿಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈಯವರಿಗೆ ನ್ಯಾಯಾಂಗ ಬಂಧನ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಂಧಿತ ಅಜಿತ್ ಕುಮಾರ್ ರೈಯವರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಅವಧಿಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು.ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಜಿತ್ ಕುಮಾರ್ ರೈಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಆರೋಪಿಯನ್ನು ಮತ್ತೆ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.ಈ ವೇಳೆ ಅಜಿತ್ ಕುಮಾರ್ ರೈ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.ವಾದ-ಪ್ರತಿವಾದಗಳನ್ನು ಆಲಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಜಿತ್ ಕುಮಾರ್ ರೈ ಅವರನ್ನು ನ್ಯಾಯಾಂಗ ಬಂಧನದಲ್ಲಿರಿಸಲು ಅದೇಶಿಸಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ

LEAVE A REPLY

Please enter your comment!
Please enter your name here