ಇರ್ದೆ-ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ತಾಲೂಕಿನಲ್ಲಿ ದ್ವಿತೀಯ

0

ನಿಡ್ಪಳ್ಳಿ: ಇರ್ದೆ-ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುತ್ತೂರು ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಪುತ್ತೂರು ಪುರಭವನದಲ್ಲಿ ಜು.7ರಂದು ನಡೆದ ನವಜೀವನ ಸದಸ್ಯರ ಸಮಾವೇಶ ಮತ್ತು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಅತಿಥಿಗಳು ಈ ಪ್ರಶಸ್ತಿ ನೀಡಿ ತಂಡವನ್ನು ಗೌರವಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಘಟಕ ವಿಪತ್ತು ನಿರ್ವಹಣೆ ಮತ್ತು ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿ ಉತ್ತಮ ಕೆಲಸ ಕಾರ್ಯ ಮಾಡಿ ಜನಮನ್ನಣೆ ಗಳಿಸಿತ್ತು. ಘಟಕದ ಅಧ್ಯಕ್ಷ ಆನಂದ, ಸಂಯೋಜಕಿ ಸೇವಾ ಪ್ರತಿನಿಧಿ ಪದ್ಮಾವತಿ. ಡಿ ಹಾಗೂ ಸದಸ್ಯರು ಪ್ರಶಸ್ತಿ ಪಡೆದು ಕೊಂಡರು.

LEAVE A REPLY

Please enter your comment!
Please enter your name here