ಕಿಲ್ಲೆ ಮೈದಾನದ ಬಳಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

0

ಪುತ್ತೂರು:5 ದಿನದ ಹಿಂದೆ ಕಿಲ್ಲೆ ಮೈದಾನದ ಬಳಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಜು.2ರಂದು ಕಿಲ್ಲೆ ಮೈದಾನದ ಬಳಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಜು.4ರಂದು ಮೃತಪಟ್ಟಿದ್ದಾರೆ.ಮೃತರ ಹೆಸರು ಮಹೇಶ್ ಯಾನೆ ಮೋಹನ್ ಎಂದು ಆಸ್ಪತ್ರೆಯ ದಾಖಲೆಯಲ್ಲಿ ದಾಖಲಿಸಲಾಗಿದ್ದರೂ ಈ ತನಕ ವ್ಯಕ್ತಿಯ ಸಂಬಂಧಿಕರು ಬಂದಿಲ್ಲ. ಹಾಗಾಗಿ ಅಪರಿಚಿತ ವ್ಯಕ್ತಿಯ ಮೃತ ದೇಹದ ಗುರುತು ಪರಿಚಯ ಸಿಕ್ಕಿದವರು ಸಮೀಪದ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here