ರಾಜ್ಯ ಮಟ್ಟದ ಕವಿ ಗೋಷ್ಠಿಗೆ ರೇಖಾ ಸುದೇಶ್ ರಾವ್ ಆಯ್ಕೆ

0

ಪುತ್ತೂರು: ಖಿದ್ಮಾ ರಾಜ್ಯ ಮಟ್ಟದ ಕವಿಗೋಷ್ಠಿಗೆ ರೇಖಾ ಸುದೇಶ್ ರಾವ್ ಆಯ್ಕೆಯಾಗಿದ್ದಾರೆ. ಜುಲೈ 9 ರಂದು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡುವ ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಇವರು ಕವಿತೆ ವಾಚನ ಮಾಡಲಿದ್ದಾರೆ ಎಂದು ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕ ಅಮೀರ್ ಬನ್ನೂರು ತಿಳಿಸಿದ್ದಾರೆ.

ರೇಖಾ ಸುದೇಶ್ ರಾವ್ ಅವರು ಪ್ರಸ್ತುತ ಶ್ರೀ ಸಿದ್ದೇಶ್ವರ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆಯಾಗಿ, ರಾಮ ಕ್ಷತ್ರಿಯ ಸೇವಾ ಸಂಘ ಮೂಲ್ಕಿ ಸುರತ್ಕಲ್ ಇದರ ಅಧ್ಯಕ್ಷೆಯಾಗಿ, ರಾಮ ಕ್ಷತ್ರಿಯ ಸಾಹಿತ್ಯ ವೇದಿಕೆಯ ಸ್ಥಾಪಕರು ಹಾಗೂ ಸಂಚಾಲಕಿಯಾಗಿ, ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಮತ್ತು ವಿವಿಧ ಸಾಹಿತ್ಯ ಹಾಗೂ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿ ಹಾಗೂ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಪುತ್ತೂರು ಕಲ್ಲಾರೆ ನಿವಾಸಿ.

LEAVE A REPLY

Please enter your comment!
Please enter your name here