ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಸುಳ್ಯ ಶಾಖೆಯಲ್ಲಿ ಉಚಿತ ಎಫ್.ಡಿ.ಎ/ಎಸ್.ಡಿ.ಎ/ಪಿಡಿಒ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

0

ಪುತ್ತೂರು: ಪುತ್ತೂರು ಸುಳ್ಯದಲ್ಲಿ ಕಾರ್ಯಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಸುಳ್ಯ ಶಾಖೆಯಲ್ಲಿ ಜು. 9 ರಂದು ಉಚಿತ ಎಫ್.ಡಿ.ಎ/ಎಸ್.ಡಿ.ಎ/ಪಿಡಿಒ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಪೂರಕವಾದ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಕೆ.ಡಿ ಸಿಂಧೆ ವಿಜಯಪುರ ಇವರು ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಪರೀಕ್ಷಾ ಪರಿವಿಡಿ,ಪರೀಕ್ಷೆಯ ತಯಾರಿಯ ಅಣುಕು ಪರೀಕ್ಷೆಗಳನ್ನು ನಡೆಸಿದರು.


ಈ ತರಬೇತಿ ಕಾರ್ಯಾಗಾರದಲ್ಲಿ ಪುತ್ತೂರು,ಸುಳ್ಯ,ಮಡಿಕೇರಿ, ಕಾಸರಗೋಡು ಮತ್ತು ಕಡಬ ತಾಲೂಕುಗಳ 53 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಗಣೇಶ್ ಕೈಂದಾಡಿಯವರು ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು. ಪ್ರಫುಲ್ಲ ಗಣೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು,ನಿಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿ, ಹರ್ಷಿತಾ ವಂದಿಸಿದರು.

LEAVE A REPLY

Please enter your comment!
Please enter your name here