`ಗೃಹ ಲಕ್ಷ್ಮೀ’ಯೋಜನೆಗೆ ಜು.16ರಿಂದ ಅರ್ಜಿ ಆರಂಭ – ಆ.15,16ರಂದು ಖಾತೆಗೆ ಹಣ-ಸಿಎಂ

0

ಬೆಂಗಳೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ `ಗೃಹ ಲಕ್ಷ್ಮೀ’ ಯೋಜನೆ ಕಾರ್ಯಕ್ರಮಕ್ಕೆ ಜು.16ರಂದು ಅರ್ಜಿ ನೋಂದಣಿ ಶುರುವಾಗಲಿದ್ದು, ಆ.15, 16ರಂದು ಖಾತೆಗೆ ಹಣ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಬಜೆಟ್ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ ಆಗಿದೆ. ನಾನು ಮಂಡನೆ ಮಾಡಿರುವ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ಹೇಳಿದ್ದೆ, ಅದೇ ರೀತಿ ಈಗ ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ಗ್ಯಾರಂಟಿಗಳಿಗೆ ಹಣವನ್ನು ಒದಗಿಸಿದ್ದೇವೆ. ರಾಜ್ಯ ದಿವಾಳಿ ಆಗದೇ ಎಚ್ಚರ ವಹಿಸಿದ್ದೇವೆ. ಅದರ ಜೊತೆಗೆ ಬಜೆಟ್ ಮಂಡಿಸಿ ಇದರ ಜೊತೆಗೆ 76 ಕಾರ್ಯಕ್ರಮಗಳನ್ನು ಜಾರಿ ಮಾಡುವುದಾಗಿ ಬಜೆಟ್‌ನಲ್ಲಿ ಉಲ್ಲೇಖ ಮಾಡಲಾಗಿದ್ದು, ಅದಕ್ಕೆ ಹಣವನ್ನು ಕೂಡ ನಿಗದಿ ಪಡಿಸಲಾಗಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

LEAVE A REPLY

Please enter your comment!
Please enter your name here