ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ

0

ಪುತ್ತೂರು” “ನಾನು ನನಗಾಗಿಯಷ್ಟೆ ಅಲ್ಲ,ಎಲ್ಲರಿಗಾಗಿ -ಎಂಬ ತತ್ವವನ್ನು ಇಟ್ಟುಕೊಂಡು ಬದುಕನ್ನು ಕಟ್ಟಿಕೊಳ್ಳುವುದು ಉಚಿತ. ರಾಷ್ಟ್ರ ಹಿತ ಸಾಧನೆಯಲ್ಲಿ ಸೇವೆ ಮಾಡುವ ಸೌಭಾಗ್ಯ ವಿದ್ಯಾರ್ಥಿಗಳಿಗೆ ದೊರೆಯಲಿ” ಎಂದು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಗಣರಾಜ ಕುಂಬ್ಳೆ ನುಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಕಾರ್ಯಕ್ರಮಾಧಿಕಾರಿ ಉಪನ್ಯಾಸಕ ಕೃಷ್ಣಪ್ರಸಾದ್ ವಾರ್ಷಿಕ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು. ಘಟಕದ ನಾಯಕಿ ಸ್ವಾತಿ ಸ್ವಾಗತಿಸಿ,ಬಿಂದ್ಯಶ್ರೀ ವಂದಿಸಿ, ಶ್ರದ್ಧಾ ನಿರೂಪಿಸಿದರು. ಘಟಕದ ನಾಯಕ ವರ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here