ಪುತ್ತೂರು ಸಹಾಯಕ ಆಯುಕ್ತರಾಗಿ ಕೆ.ಮಹೇಶ್ಚಂದ್ರ ಅಧಿಕಾರ ಸ್ವೀಕಾರ

0

ಪುತ್ತೂರು: ಪುತ್ತೂರಿನ ನೂತನ ಸಹಾಯಕ ಆಯುಕ್ತರಾಗಿ ಕೆ ಮಹೇಶ್ಚಂದ್ರ ಇಂದು ( ಜು.10 )ಅಧಿಕಾರ ಸ್ವೀಕರಿಸಿದ್ದಾರೆ. ಪುತ್ತೂರಿನಲ್ಲಿ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ತೆರವಾದ ಹುದ್ದೆಗೆ ಮಹೇಶ್ಚಂದ್ರ ಆಗಮಿಸಿದ್ದಾರೆ. ಮಹೇಶ್ಚಂದ್ರ ಅವರು ಈ ಹಿಂದೆ ಬೈಕಂಪಾಡಿಯ ಕೆಐಎಡಿಬಿ ಕಚೇರಿಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here