ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ- ದೃಶನ ಸುರೇಶ್ ಸರಳಿಕಾನ ಕಟಾದಲ್ಲಿ ಪ್ರಥಮ, ಕುಮಿಟೆಯಲ್ಲಿ ದ್ವಿತೀಯ

0

ಪುತ್ತೂರು: ಗದಗ ಕನಕ ಭವನದಲ್ಲಿ ನಡೆದ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಸ್ಪರ್ಧಾ ಕೂಟದಲ್ಲಿ ದೃಶನ ಸುರೇಶ್ ಸರಳಿಕಾನ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಬ್ಲ್ಯಾಕ್ ಬೆಲ್ಟ್ ಪಡೆದುಕೊಂಡಿದ್ದಾರೆ.

ಕಳೆದ ವರ್ಷ ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿಯೂ ಪ್ರಥಮ ಸ್ಥಾನ ಪಡೆದಿದ್ದರು.

ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿಯಾಗಿರುವ ಈಕೆ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್ ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಇದರ ವಿದ್ಯಾರ್ಥಿಯಾಗಿರುವ ಈಕೆ ಬೆಟ್ಟಂಪಾಡಿ ಗ್ರಾ.ಪಂ ಸದಸ್ಯೆವಿದ್ಯಾಶ್ರೀ ಮತ್ತು ಸುರೇಶ್ ಗೌಡ ಸರಳಿಕಾನ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here