ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ವಿಸರ್ಜನೆ – ಹೊಸ ಸಮಿತಿ ಶೀಘ್ರದಲ್ಲಿ ಪುನರ್‌ರಚನೆ-ಸುಧೀರ್ ಕುಮಾರ್ ಶೆಟ್ಟಿ

0

ಕಡಬ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಎಲ್ಲಾ ಗ್ರಾಮಗಳಿಗೆ ಪ್ರಾತಿನಿಧ್ಯ ಇರುವಂತೆ ಈ ಹಿಂದೆ ರಚಿಸಿದ್ದೇವೆ, ಇದೀಗ ಆ ಸಮಿತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬರ್ಖಾಸ್ತುಗೊಳಿಸಲಾಗಿದೆ, ಪಕ್ಷದ ಬಲವರ್ಧನೆಗೋಸ್ಕರ ಶೀಘ್ರದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here