ಜು.14: ಅಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಉದ್ಘಾಟನೆ

0

ಪುತ್ತೂರು: ಎ.ಪಿ.ಎಂ.ಸಿ. ರಸ್ತೆ, ಆದರ್ಶ ಆಸ್ಪತ್ರೆ ಬಳಿಯ ಜೆ.ಎಂ.ಜೆ. ಕಾಂಪ್ಲೆಕ್ಸ್ ನಲ್ಲಿ ಅಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಉದ್ಘಾಟನೆಯು ಜು.14 ರಂದು ನೆರವೇರಲಿದೆ.

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಮಹೇಶ್ ಚಂದ್ರರವರು ನೂತನ ಸೊಸೈಟಿಯನ್ನು ಉದ್ಘಾಟಿಸಲಿದ್ದಾರೆ. ಶ್ರೀಧಾಮ ಮಾಣಿಲದ ಸ್ವಾಮೀಜಿಗಳಾದ ಮೋಹನದಾಸ ಪರಮ ಹಂಸ ಸ್ವಾಮೀಜಿರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ಆಶೀರ್ವಚಿಸಲಿದ್ದಾರೆ. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಕೆ.ರವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಸಂಪ್ಯ ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ ನಡುಬೈಲು, ಸಾಲ್ಮರ ದಾರುಲ್ ಹಸನಿಯಾ ಮರಿಯಂ ಹಿಫ್ಲುಲ್ ಕುರ್ ಆನ್ ಕಾಲೇಜ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಕೆ. ಹಸನ್, ಜೆ.ಎಂ.ಜೆ. ಕಾಂಪ್ಲೆಕ್ಸ್ ಮಾಲಕ ಅಂಟನಿ ಒಲಿವೆರಾರವರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರವರ್ತಕರು ಮತ್ತು ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here