ಆರ್ಯಾಪು ಗ್ರಾ.ಪಂ ಉಪ ಚುನಾವಣೆ- ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ, ವಸಂತ ನಾಮಪತ್ರ

0

ಪುತ್ತೂರು: ಆರ್ಯಾಪು ಗ್ರಾ.ಪಂಗೆ ಜು.23 ರಂದು ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ ಹಾಗೂ ಹಾಲಿ ಸದಸ್ಯ ವಸಂತ ಶ್ರೀ ದುರ್ಗಾರವರು ಜು.12ರಂದು ನಾಮಪತ್ರ ಸಲ್ಲಿಸಿದರು.


ಮಾಜಿ ಶಾಸಕ ಸಂಜೀವ ಮಠಂದೂರು, ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತಿಶ್ ಶಾಂತಿವನ, ಜಿಲ್ಲಾ‌ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನಗರ ಮಂಡಲದ ಅಧ್ಯಕ್ಷ ಜಗನ್ನಿವಾಸ ರಾವ್, ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ, ನಗರ ಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಪೂರ್ಣಿಮಾ ರೈ, ಸದಸ್ಯರಾದ ಯತೀಶ್ ದೇವ, ಶ್ರೀನಿವಾಸ ರೈ, ಪವಿತ್ರ ರೈ, ಹರೀಶ್ ನಾಯಕ್ ವಾಗ್ಲೆ, ರತ್ನಾವತಿ, ಗೀತ, ಪ್ರಮುಖರಾದ ರಾಜೇಶ್ ಬನ್ನೂರು, ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಮಹೇಶ್ ರೈ, ವಿಶ್ವನಾಥ ‌ಮಚ್ಚಿಮಲೆ, ಜಯಂತ ಶೆಟ್ಟಿ ಕಂಬಳತ್ತಡ್ಡ, ಜಯಶ್ರೀ ಶೆಟ್ಟಿ, ಹರಿಪ್ರಸಾದ್ ಯಾಧವ್, ಅರುಣ್ ವಿಟ್ಲ ಹಾಗೂ ರಾಮ್ ಪ್ರಸಾದ್ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here