ಜು.15: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರದ ಶಂಕರ ವ್ರತ ಪೂಜೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತೀ ಕೃಷ್ಣಪ್ರದೋಷದಂದು ನಡೆಸಲು ಉದ್ದೇಶಿಸಿದಂತೆ ಜು.15ರಂದು ಸಾರ್ವಜನಿಕ ಶ್ರೀ ವರದ ಶಂಕರ ವ್ರತ ಪೂಜೆ ನಡೆಯಲಿದೆ.


ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ವರದ ಶಂಕರ ವ್ರತ ಪೂಜೆ ನಡೆಯಲಿದ್ದು, ಸಂಜೆ ಗಂಟೆ 4ರಿಂದ ಪೂಜೆ ಆರಂಭಗೊಳ್ಳಲಿದೆ. ಸಂಜೆ ಗಂಟೆ 5ರಿಂದ ಕಥಾಶ್ರವಣ, ಗಂಟೆ 6ಕ್ಕೆ ಮಂಗಳಾರತಿ ನಡೆಯಲಿದೆ. ಪೂಜೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here