ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಪುತ್ತೂರು ತಾಲೂಕಿಗೆ ಸಂಬಂಧಿಸಿದ ಸಮಾಜಬಾಂಧವ ವಿದ್ಯಾರ್ಥಿಗಳಲ್ಲಿ ಎಸ್ಎಸ್ಎಲ್ಸಿ, ಪಿಯುಸಿಗೆ ಸಂಬಂಧಿಸಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ನೀಡುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರವನ್ನು ಜು.30ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೀಡಲಾಗುವುದು. ಈ ನಿಟ್ಟಿನಲ್ಲಿ ಪುತೂರು ತಾಲೂಕಿಗೆ ಸಂಬಂದಪಟ್ಟ ಸಮಾಜ ಬಾಂದವರು ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಜು.20ರ ಒಳಗೆ ಸಂಘದ ಕಚೇರಿಯಲ್ಲಿ ನೀಡಬೇಕು ಎಂದು ಸಂಘದ ಪ್ರಕಟಣೆ ತಿಳಿಸಿದೆ.