ಸಹಕಾರಿ ಸಂಸ್ಥೆಗಳ ತೊಂದರೆಗಳನ್ನು ನಿವಾರಣೆ ಮಾಡಿ ಸಹಕಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಕೇಂದ್ರ ಸರಕಾರದ ಸೂಚನೆಯಂತೆ ಹಿಂದಿನ ರಾಜ್ಯ ಬಿಜೆಪಿ ಸರಕಾರವು ಏಕರೂಪದ ಬೈಲಾ ತಯಾರಿಸಿ ಬೈಲಾವನ್ನು ಸಹಕಾರಿ ಸಂಘಗಳ ಮಹಾಸಭೆಯಲ್ಲಿ ಅಂಗೀಕರಿಸಬೇಕೆಂದು ಅದೇಶ ಹೊರಡಿಸಿದೆ. ಈ ಆದೇಶದ ಮೂಲಕ ಸಹಕಾರಿ ಸಂಘಗಳನ್ನು ಆದಾಯ ತೆರಿಗೆ ವ್ಯಾಪ್ತಿಗೆ ತರುವ ಹುನ್ನಾರವನ್ನು ಬಿಜೆಪಿ ಸರಕಾರ ನಡಸಿರುತ್ತದೆ. ಇದರಿಂದ ಸಹಕಾರಿ ಸಂಘಗಳು ಸಂಕಷ್ಟಕ್ಕೆ ಒಳಗಾಗುತ್ತದೆ, ಆದುದರಿಂದ ನಮ್ಮ ಸರಕಾರವು ಬಿಜೆಪಿ ಸರಕಾರದ ಈ ಆದೇಶವನ್ನು ಜಾರಿ ಆಗದಂತೆ ತಡೆಯಬೇಕು ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಲ್ಲಿ ಮನವಿ ಮಾಡಿದರು.
ಇದೀಗ ಸರಕಾರ ಸಹಕಾರಿ ಸಂಘದಿಂದ ಸಾಲ ಪಡೆಯುವ ರೈತರಿಗೆ ಫಾರ್ಮರ್ ಐ ಡಿ ಮಾಡಿಸಬೇಕೆಂದು ಆದೇಶ ಮಾಡಿದೆ. ಇದು ಒಳ್ಳೆಯ ವಿಚಾರ ಆದರೆ ಎಫ್ -ಐಡಿ ಮಾಡಿಸುವ ಸಂದರ್ಭಲ್ಲಿ ಜಿ ಪಿ ಎ ಹೋಲ್ಡರ್ ಗಳಿಗೆ ಆಗುವ ಸಮಸ್ಯೆಯನ್ನು ಬಗೆಹರಿಸಬೇಕು ಮತ್ತು ಎಫ್- ಐಡಿ ಮಾಡಿಸಲು ಸಹಕಾರಿ ಸಂಘಗಳಿಗೆ ಇನ್ನಷ್ಟು ಸಮಯವಕಾಶ ನೀಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು, ಕೃಷಿಕರಿಗೆ ನೀಡುತ್ತಿದ್ದ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು ರೂ.3 ಲಕ್ಷ ದಿಂದ 5 ಲಕ್ಷಕ್ಕೆ ಹಾಗೂ ಕೃಷಿ ಅಭಿವೃದ್ಧಿ ಸಾಲವನ್ನು ರೂ.10 ಲಕ್ಷದಿಂದ 15 ಲಕ್ಷಕ್ಕೆ ಏರಿಸಿರುವುದಕ್ಕೆ ಈ ಸಂದರ್ಭದಲ್ಲಿ ಸಹಕಾರ ಸಚಿವರನ್ನುಶಾಸಕರು ಅಭಿನಂದಿಸಿದರು
ಈ ಸಂದರ್ಭದಲ್ಲಿ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಮಾಜಿ ಜಿಪ ಸದಸ್ಯ ಎಂ ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ, ರೋಷನ್ ರೈ ಬನ್ನೂರು,ಪುತ್ತೂರು ರೈತ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here