ಜು.15- ಪುಣ್ಚತ್ತಾರಿನಲ್ಲಿ ಶ್ರೀ ಹರಿ ರಿಕ್ಷಾ ತಂಗುದಾಣ ಉದ್ಘಾಟನೆ

0

ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ರಿಕ್ಷಾ ಚಾಲಕ ಮಾಲಕರ ಸಂಘ ಮತ್ತು ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಸುಮಾರು ರೂ 1.70 ಲಕ್ಷ ವೆಚ್ಚದಲ್ಲಿ ಭಾಸ್ಕರ ಗೌಡ ಮುರುಳ್ಯ ಅವರು ಪುಣ್ಚತ್ತಾರಿನಲ್ಲಿ ನಿರ್ಮಿಸಿಕೊಟ್ಟ ಶ್ರೀ ಹರಿ ರಿಕ್ಷಾ ತಂಗುದಾಣದ ಉದ್ಘಾಟನೆಯು ಜು.15ರಂದು ನಡೆಯಲಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು, ಪಂಜ ಲಯನ್ಸ್ ಕ್ಲಬ್‌ನ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಲಯನ್ಸ್ ಜಿಲ್ಲಾ ಸಂಪುಟ ಸಂಯೋಜಕ ಜಾಕೆ ಮಾಧವ ಗೌಡ ಅಭಿನಂದನಾ ಭಾಷಣ ಮಾಡಲಿದ್ದಾರೆ. ಲಯನ್ಸ್ ಜಿಲ್ಲೆ ಪೂರ್ವ ರಾಜ್ಯಪಾಲರಾದ ಡಾ| ಗೀತಪ್ರಕಾಶ್, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪುಣ್ಚತ್ತಾರು ಶ್ರೀ ಹರಿ ರಿಕ್ಷಾ ಚಾಲಕ ಮಾಲಕರ ಸಂಘದ ಪೂರ್ವಾಧ್ಯಕ್ಷ ದಿನೇಶ್ ಪೈಕ, ಪುಣ್ಚತ್ತಾರು ಶ್ರೀ ಹರಿ ಭಜನಾ ಮಂಡಳಿಯ ಅಧ್ಯಕ್ಷ ಮಧುಕರ ಬೇಂಗಡ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುಣ್ಚತ್ತಾರು ಶ್ರೀ ಹರಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಗಿರೀಶ್ ಬೀಜತಡ್ಕ, ಪಂಜ ಲಯನ್ಸ್ ಕ್ಲಬ್‌ನ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here