ಇಂದು(ಜು.15): ಪಡುಬೆಟ್ಟುವಿನಲ್ಲಿ ದಿ.ಗೋಪಾಲಕೃಷ್ಣ ಶಗ್ರಿತ್ತಾಯರಿಗೆ ನುಡಿನಮನ

0

ನೆಲ್ಯಾಡಿ: ಯಕ್ಷಗಾನ ಲೋಕದ ಭೀಷ್ಮ, ಸಾಹಿತ್ಯ ರತ್ನ ಬಿರುದಾಂಕಿತ ಮಹಾನ್ ಚೇತನ, ಪ್ರಖರ ವಾಗ್ಮಿ ಕೀರ್ತಿಶೇಷ ದಿ.ಗೋಪಾಲಕೃಷ್ಣ ಶಗ್ರಿತ್ತಾಯ ಶಾಂತಿಗೋಡು ಇವರಿಗೆ ನುಡಿನಮನ ಕಾರ್ಯಕ್ರಮ ಜು.15ರಂದು(ಇಂದು) ಬೆಳಿಗ್ಗೆ 11 ಗಂಟೆಗೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.


ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸುಮಾರು 26ವರ್ಷ ಸೇವೆ ಸಲ್ಲಿಸಿ ಶಾಲೆಯ ಹಾಗೂ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ದಿ.ಗೋಪಾಲಕೃಷ್ಣ ಶಗ್ರಿತ್ತಾಯರವರು ಶ್ರಮಿಸಿದ್ದರು. ಮಕ್ಕಳ ಸಾಹಿತ್ಯ ಲೋಕದಲ್ಲಿ ಅನೇಕ ಕೃತಿಗಳನ್ನು ರಚಿಸಿ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ದಿ.ಗೋಪಾಲಕೃಷ್ಣ ಶಗ್ರಿತ್ತಾಯ ಇವರ ಶಿಷ್ಯವೃಂದದವರಿಂದ ಯಕ್ಷಗಾನ ತಾಳಮದ್ದಳೆ ವಿಶ್ವರೂಪ ದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here