ನಿಡ್ಪಳ್ಳಿ : ಗ್ರಾಪಂ ಉಪ ಚುನಾವಣೆ- ಕಾಂಗ್ರೆಸ್ ಕಾರ್ಯಕರ್ತರ ಸಭೆ

0

ಸರಕಾರದ ಯೋಜನೆಯನ್ನು ಮನೆ ಮನೆಗೆ ತಲುಪಿಸಿ ಮತಯಾಚಿಸಿ: ಶಾಸಕ ರೈ


ಪುತ್ತೂರು:‌ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ ಪ್ರಯುಕ್ತ ಶಾಸಕರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲ್ಲಬೇಕು, ಇದಕ್ಕಾಗಿ ಕಾರ್ಯಕರ್ತರು ಪ್ರತೀ ಮನೆ ಮನೆಗೂ ತೆರಳಿ ಮತಯಾಚನೆ ಮಾಡಬೇಕಿದೆ, ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಎಂದರು.


ರಾಜ್ಯದ ಕಾಂಗ್ರೆಸ್ ಸರಕಾರ ಬಡವರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಯಿಂದ ಬಡವರಿಗೆ ಪ್ರಯೋಜನವಾಗಿದೆ. ಗ್ರಾಮದ ಪ್ರತೀಯೊಬ್ಬ ವ್ಯಕ್ತಿಗೂ ಯೋಜನೆಯ ಲಾಭ ದೊರಕಿದೆ. ಮುಂದೆಯೂ ಉಳಿದ ಯೋಜನೆಗಳ ಪ್ರಯೋಜನ ದೊರೆಯಲಿದೆ ಎಂಬುದನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here