ಪುತ್ತೂರು ಉಪವಿಭಾಗಧಿಕಾರಿಯಾಗಿ ಮತ್ತೆ ಗಿರೀಶ್‌ ನಂದನ್‌ ಅಧಿಕಾರ ಸ್ವೀಕಾರ

0

ಪುತ್ತೂರು:ಪುತ್ತೂರು ಉಪವಿಭಾಗಾಧಿಕಾರಿಯಾಗಿ ಗಿರೀಶ್‌ ನಂದನ್‌ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪುತ್ತೂರಿನಲ್ಲಿ ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್‌ ನಂದನ್‌ ಅವರನ್ನು ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಸರಕಾರ ವರ್ಗಾವಣೆ ಮಾಡಿತ್ತು.ಈ ವರ್ಗಾವಣೆಯನ್ನು ಪ್ರಶ್ನಿಸಿ ಗಿರೀಶ್‌ ನಂದನ್‌ ಕೆಎಟಿಗೆ ದೂರು ದಾಖಲಿಸಿದ್ದರು ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದು ಇಂದು ಗಿರೀಶ್‌ ನಂದನ್‌ ಮತ್ತೆ ಪುತ್ತೂರು ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here