ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಬಿಡುಗಡೆಯಾದ ಕಾಮಗಾರಿ ಕೂಡಲೇ ಮುಂದುವರಿಸಲು ಆಯುಕ್ತರ ಸೂಚನೆ

0

ಪುತ್ತೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳನ್ನು ಕೂಡಲೇ ಮುಂದುವರಿಸಲು ಮತ್ತು ಸದ್ರಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಧಾರ್ಮಿಕ ದತ್ತಿ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತಾದರೂ ಯೋಜಿತ ಕಾಮಗಾರಿಗಳನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ರಾಜ್ಯದ ನೂತನ ಸರಕಾರ ಸೂಚಿಸಿತ್ತು.ಇದೀಗ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಯವರು ಕಾಮಗಾರಿ ಮುಂದುವರಿಸಲು ಸೂಚನೆ ನೀಡಿದ್ದಾರೆ.ಈ ನಿಟ್ಟಿನಲ್ಲಿ, 2022-23ನೇ ಸಾಲಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಬಿಡುಗಡೆಯಾದ ಕಾಮಗಾರಿಗಳನ್ನು ಕೂಡಲೇ ಮುಂದುವರಿಸಬೇಕು ಮತ್ತು ಸದ್ರಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡುವಂತೆ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here