ಪುತ್ತೂರು ನಗರಸಭೆ ರವೀಂದ್ರ ಕುಮಾರ್‌ ಅವರಿಗೆ ವರ್ಗಾವಣೆ ನಗರಸಭೆ ಕಚೇರಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ನಗರಸಭೆಯಲ್ಲಿ ಸೂಪರ್‌ವೈಸರ್ ಆಗಿ ಕರ್ತವ್ಯ ನಿರ್ವಹಿಸಿ ತೆರಿಗೆ ವಸೂಲಿಗಾರಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಬನ್ನೂರು ನಿವಾಸಿ ರವೀಂದ್ರ ಅವರಿಗೆ ನಗರಭೆ ಕಚೇರಿಯಲ್ಲಿ ಬೀಳ್ಕೊಡಲಾಯಿತು.‌

ರವೀಂದ್ರ ಅವರು ಮೂಲ್ಕಿ ಪಟ್ಟಣಪಂಚಾಯತ್‌ಗೆ ವರ್ಗಾವಣೆಗೊಂಡರೂ ಅಲ್ಲಿಂದ ಅವರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಗೆ ನಿಯೋಜನೆಗೊಂಡಿದ್ದಾರೆ. ಅವರಿಗೆ ಪುತ್ತೂರು ನಗರಸಭೆಯಲ್ಲಿ ಜು.15ರಂದು ಸಂಜೆ ಬೀಳ್ಕೊಡುವ ಕಾರ್ಯಕ್ರಮ ನಡೆಸಲಾಯಿತು. ಪೌರಾಯುಕ್ತ ಮಧು ಎಸ್ ಮನೋಹರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದುರ್ಗಾಪ್ರಸಾದ್, ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ನಗರಸಭಾ ಸದಸ್ಯ ಯೂಸೂಫ್ ಡ್ರೀಮ್, ಸಿ.ಆರ್ ದೇವಾಡಿಗ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here