ಕಾವು ತುಡರ್ ಯುವಕ ಮಂಡಲದಿಂದ ವನಮಹೋತ್ಸವ-ಭರತನಾಟ್ಯ ವಿದ್ಯಾರ್ಥಿಗಳಿಗೆ ಸಸಿ ವಿತರಣೆ

0

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದಿಂದ ಜು.16ರಂದು ವನಮಹೋತ್ಸವ ಆಚರಿಸಲಾಯಿತು. ತುಡರ್ ಯುವಕ ಮಂಡಲದ ನೇತೃತ್ವದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು ಇವರ ಸಹಕಾರದೊಂದಿಗೆ ನನ್ಯ ಜನಮಂಗಲದಲ್ಲಿ ನಡೆಯುತ್ತಿರುವ ಭರತನಾಟ್ಯ ತರಬೇತಿಯ ಎಲ್ಲಾ ಮಕ್ಕಳಿಗೆ ಸಸಿ ವಿತರಣೆ ಮಾಡಿ ಮಕ್ಕಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ನಾಯ್ಕ ಆಚಾರಿಮೂಲೆ, ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಜತೆ ಕಾರ್ಯದರ್ಶಿ ತಿರುಮಲೇಶ ಮಿನೋಜಿಕಲ್ಲು, ಕೋಶಾಧಿಕಾರಿ ಹರೀಶ್ ಕೆರೆಮೂಲೆ, ಭಜನಾ ಸಂಘದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಕಾರ್ಯದರ್ಶಿ ಲಿಂಗಪ್ಪ ನಾಯ್ಕ ನನ್ಯ, ಯುವಕ ಮಂಡಲದ ಸದಸ್ಯರಾದ ಬಾಲಕೃಷ್ಣ ಪಾಟಾಳಿ, ನಿರಂಜನ ರಾವ್, ರಾಜೇಶ್ ಬಿ, ಭವಿತ್ ರೈ ಮದ್ಲ, ಭರತನಾಟ್ಯ ಶಿಕ್ಷಕಿಯರಾದ ಅಕ್ಷತಾ, ಅಪೂರ್ವ, ಮಕ್ಕಳ ಪೋಷಕರು ಪಾಲ್ಗೊಂಡಿದ್ದರು. ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನನ್ಯ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here