ಉಪ್ಪಿನಂಗಡಿ:ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ- ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು:ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ಗ್ರಾಮದ ದುರ್ಗಾಗಿರಿ ಮತ್ತು ನಿನ್ನಿಕಲ್ಲು ಒಕ್ಕೂಟದ ಸದಸ್ಯರಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಜು.16ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ವಲಯ ಮೇಲ್ವಿಚಾರಕ ಶಿವಪ್ಪ, ಜನಜಾಗೃತಿ ವಲಯಾಧ್ಯಕ್ಷರು ಮತ್ತು ಒಕ್ಕೂಟದ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ, ಸೇವಾ ಪ್ರತಿನಿಧಿಗಳಾದ ಉಷಾಹರೀಶ್ ಶಶಿ ಗಂಗಾಧರ, ಒಕ್ಕೂಟದ ಕಾರ್ಯದರ್ಶಿ ಅನುರಾದ ಪ್ರಗತಿ ಬಂಧು, ಸ್ವ-ಸಹಾಯ ಸಂಘಗಳ 52 ಜನ ಸದಸ್ಯರು ಪಾಲ್ಗೊಂಡರು.

LEAVE A REPLY

Please enter your comment!
Please enter your name here