ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ಮತ್ತು ಶ್ರೀರಾಮ ಗ್ರಾಮ ವಿಕಾಸ ಸಮಿತಿ ನೆಲ್ಯಾಡಿ ಇದರ ವತಿಯಿಂದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನೆಲ್ಯಾಡಿ ಹೊರಠಾಣೆ ಸಹಯೋಗದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶಯದಂತೆ ವಿವೇಕ ಸಂಜೀವಿನಿ ಕಾರ್ಯಕ್ರಮವನ್ನು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನೆಲ್ಯಾಡಿ ಹೊರಠಾಣೆಯಲ್ಲಿ ನಡೆಸಲಾಯಿತು.


ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ, ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್ಸ್‌ಸ್ಟೇಬಲ್ ಕುಶಾಲಪ್ಪ, ಅರಣ್ಯ ಇಲಾಖೆಯ ಅಧಿಕಾರಿ ದೇವಿಪ್ರಸಾದ್‌ರವರು ಅತಿಥಿಗಳಾಗಿ ಭಾಗವಹಿಸಿದ್ದರು. ಸುಮಾರು 40 ವರುಷಗಳಿಂದ ನಾಟಿ ವೈದ್ಯರಾಗಿರುವ ಹೇಮಾವತಿ ಶೆಟ್ಟಿ ಬಲ್ಯ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರಕ್ಷಕ ಠಾಣೆಯ ಆವರಣದಲ್ಲಿ ಔಷಧಿಯ ಸಸಿಗಳನ್ನು ನೆಡಲಾಯಿತು.


ಶ್ರೀರಾಮ ವಿದ್ಯಾಲಯದ ಕಾರ್ಯದರ್ಶಿ ಮೂಲಚಂದ್ರ ಕಾಂಚನ, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ ಬಲ್ಯ ಶ್ರೀರಾಮ ಗ್ರಾಮ ವಿಕಾಸದ ಅಧ್ಯಕ್ಷ ಗಂಗಾಧರ ಶೆಟ್ಟಿ ಕೊಲ್ಯೊಟ್ಟು, ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲೋಕೇಶ್ ಕೊಲ್ಯೊಟ್ಟು, ಗ್ರಾಮ ವಿಕಾಸ ಸಮಿತಿ ಸದಸ್ಯರು, ಶ್ರೀರಾಮ ವಿದ್ಯಾಲಯದ ಮುಖ್ಯಗುರು ಗಣೇಶ್ ವಾಗ್ಲೆ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಅನಿಲ್ ಅಕ್ಕಪ್ಪಾಡಿ ಕಾರ್ಯಕ್ರಮ ಸಂಘಟಿಸಿದರು. ಔಷಧಿ ವನದ ಸಂರಕ್ಷಣೆ ಜವಾಬ್ದಾರಿಯನ್ನು ಗ್ರಾಮ ವಿಕಾಸದ ಸದಸ್ಯರು ವಹಿಸಿಕೊಂಡರು.

LEAVE A REPLY

Please enter your comment!
Please enter your name here