ತಾ|ಬಿಲ್ಲವ ಮಹಿಳಾ ವೇದಿಕೆಯಿಂದ ಮಹಿಳಾ ಸಂಭ್ರಮ 2023-ಉಷಾ ಅಂಚನ್ ರವರಿಗೆ ಸನ್ಮಾನ

0

ಪುತ್ತೂರು: ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಂಭ್ರಮ 2023 ಇದರ ಅಂಗವಾಗಿ ಸಹಕಾರಿ ಕ್ಷೇತ್ರದ ಮಹಿಳಾ ಸಾಧಕಿಯಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಉಷಾ ಅಂಚನ್ ರವರಿಗೆ ಸನ್ಮಾನ ಮಾಡಲಾಯಿತು.


ಕಳೆದ ಹಲವು ವರ್ಷಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿ, ರಾಜಕೀಯ ಕ್ಷೇತ್ರದಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಸಹಕಾರಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ಉಷಾ ಅಂಚನ್ ರವರನ್ನು ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ವತಿಯಿಂದ ಪುತ್ತೂರು ಬಿಲ್ಲವ ಸಂಘದಲ್ಲಿ ‘ಸಹಕಾರಿ ಕ್ಷೇತ್ರದ ಸಾಧಕಿ’ ಎಂಬ ನೆಲೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಉಷಾ ಅಂಚನ್ ರವರು ಬ್ರಹ್ಮಶ್ರೀ ವಿವಿದೋದ್ಧೇಶ ಸಹಕಾರಿ ಸಂಘದ ನಿರ್ದೇಶಕಿಯಾಗಿ, ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘದ ನಿರ್ದೇಶಕಿಯಾಗಿ, ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕಿಯಾಗಿ ಹಾಗೂ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ, ಮೂರ್ತೆದಾರರ ಮಹಾಮಂಡಲದಲ್ಲಿ ಎರಡು ಬಾರಿ ನಿರ್ದೇಶಕಿಯಾಗಿ, ನೆಲ್ಯಾಡಿ ಸೇವಾ ಸಹಕಾರ ಸಂಘದ ನಿರ್ದೇಶಕಿಯಾಗಿ, ಕೊಣಾಲು ಹಾಲು ಉತ್ಪಾದಕರ ಸಂಘದ ಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಕಲಾ ಮುಕ್ವೆ, ಸಂಚಾಲಕಿ ವಿಶಾಲಾಕ್ಷಿ ಬನ್ನೂರು, ಮಹಿಳಾ ವೇದಿಕೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here