ನೆಲ್ಯಾಡಿ ವಲಯ ಬಂಟರ ಸಂಘ-ಗೌರವಾಧ್ಯಕ್ಷ: ವಿಶ್ವನಾಥ ಶೆಟ್ಟಿ, ಅಧ್ಯಕ್ಷ:ಪ್ರತಾಪ್‌ಚಂದ್ರ ರೈ, ಕಾರ್ಯದರ್ಶಿ: ಮಹಾಬಲ ಶೆಟ್ಟಿ,ಕೋಶಾಧಿಕಾರಿ: ಆನಂದ ಶೆಟ್ಟಿ

0

ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಪ್ರತಾಪ್‌ಚಂದ್ರ ರೈ ಕುದ್ಮಾರುಗುತ್ತು, ಕಾರ್ಯದರ್ಶಿಯಾಗಿ ಮಹಾಬಲ ಶೆಟ್ಟಿ ದೋಂತಿಲ, ಕೋಶಾಧಿಕಾರಿಯಾಗಿ ಆನಂದ ಶೆಟ್ಟಿ ಕಂಚಿನಡ್ಕ ಹಾಗೂ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಶ್ರೀಮಾತಾ ಆಯ್ಕೆಯಾಗಿದ್ದಾರೆ.


ಜು.16ರಂದು ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ನಿರ್ಗಮನ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತುರವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿಗೆ 26 ಮಂದಿಯನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಸ್ವಾಗತಿಸಿ, ಹಾಲಿ ಕಾರ್ಯದರ್ಶಿ ವಾಣಿ ಸುಂದರ ಶೆಟ್ಟಿ ವಂದಿಸಿದರು. ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ರತ್ನಾಕರ ಶೆಟ್ಟಿ ಕೊಲ್ಯೊಟ್ಟು ಉಪಸ್ಥಿತರಿದ್ದರು.


ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪ್ರತಾಪ್‌ಚಂದ್ರ ರೈಯವರು ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಗೋಳಿತ್ತೊಟ್ಟು ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಮಹಾಬಲ ಶೆಟ್ಟಿಯವರು ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.

LEAVE A REPLY

Please enter your comment!
Please enter your name here