ಕಡಬ: 50ನೇ ವರ್ಷದ ಗಣೇಶೋತ್ಸವ ಆಚರಣೆ- ಸಮಿತಿ ರಚನೆ

0

ಅಧ್ಯಕ್ಷ: ಗಿರೀಶ್ ಎ.ಪಿ. ಕಾರ್ಯದರ್ಶಿ: ಶಿವಪ್ರಸಾದ್ ರೈ

ಕಡಬ: ಇಲ್ಲಿನ ಧಾರ್ಮಿಕ ಉತ್ಸವ ಸಮಿತಿ ವತಿಯಿಂದ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯುವ 50ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮೈಲೇರಿ, ಕೋಶಾಧಿಕಾರಿಯಾಗಿ ಅಶೋಕ್ ಕುಮಾರ್ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಮೋನಪ್ಪ ಗೌಡ ನಾಡೋಲಿ,ಸೀತಾರಾಮ ಗುರುಕೃಪಾ, ಜತೆ ಕಾರ್ಯದರ್ಶಿಯಾಗಿ ಸದಾನಂದ ಅವರು ಆಯ್ಕೆಯಾಗಿದ್ದಾರೆ. ಆಯ್ಕೆ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಇತ್ತೀಚೆಗೆ ನಡೆಯಿತು.

LEAVE A REPLY

Please enter your comment!
Please enter your name here