ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲರವರಿಗೆ ಪಿತೃವಿಯೋಗ

0

ವಿಟ್ಲ : ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಅರುಣ್ ವಿಟ್ಲ ರವರ ತಂದೆ ಎಂ. ನಾರಾಯಣ (ಬಟ್ಟು ಸ್ವಾಮಿ) (70 ವ.) ರವರು ಜು.17 ರಂದು ಅನಾರೋಗ್ಯದಿಂದಾಗಿ ನಿಧನರಾದರು.ವಿಟ್ಲ ಅಯ್ಯಪ್ಪ ದೇವಸ್ಥಾನದ ಮುಖ್ಯಸ್ಥರಾಗಿದ್ದ ಎಂ ನಾರಾಯಣ ರವರು ಗುರುಸ್ವಾಮಿಯಾಗಿದ್ದು,ನೂರಾರು ಅಯ್ಯಪ್ಪ ಭಕ್ತರಿಗೆ ಮಾರ್ಗದರ್ಶನ ನೀಡಿದ್ದರು. ಪ್ರತಿವರ್ಷ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದರು. ಮೃತರು ಅರುಣ್ ವಿಟ್ಲ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here