ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

0

ಪುತ್ತೂರು: ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಜು.15 ರಂದು ಪರ್ಪುಂಜ ಶಿವಕೃಪಾ ಅಡಿಟೋರಿಯಂನಲ್ಲಿ ನಡೆಯಿತು. ಪುತ್ತೂರು ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ರವಿಯವರು ಸಭಾಧ್ಯಕ್ಷತೆ ವಹಿಸಿದ್ದರು. ನಿವೃತ್ತ ಎಎಸ್‌ಐಗಳಾದ ನಾರಾಯಣ ಗೌಡ, ರಾಮಚಂದ್ರ ಮಣಿಯಾಣಿ ಉಪಸ್ಥಿತರಿದ್ದರು.


ಸನ್ಮಾನ,ಬೀಳ್ಕೊಡುಗೆ
ಗ್ರಾಮಾಂತರ ಠಾಣೆಯಲ್ಲಿ ಮೂರು ವರ್ಷಗಳ ಕರ್ತವ್ಯ ಸಲ್ಲಿಸಿ ಪುತ್ತೂರು ಸಂಚಾರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಉದಯರವಿ, 5 ತಿಂಗಳ ಕಾಲ ಕರ್ತವ್ಯ ಸಲ್ಲಿಸಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಮಕೃಷ್ಣ, 2 ವರ್ಷ ಪ್ರೊಬೇಷನರಿ ಪಿಎಸ್‌ಐ ಆಗಿ ಕರ್ತವ್ಯ ಸಲ್ಲಿಸಿ ವಿಟ್ಲ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಕಾರ್ತಿಕ್, ಮಂಗಳೂರು ಠಾಣೆಗೆ ವರ್ಗಾವಣೆಗೊಂಡ ಭವಾನಿ, ಮೂರು ವರ್ಷ ಕರ್ತವ್ಯ ಸಲ್ಲಿಸಿ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡ ಎಚ್‌ಸಿ ವರ್ಗೀಸ್, 6 ವರ್ಷ ಕಾಲ ಕರ್ತವ್ಯ ಸಲ್ಲಿಸಿ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡ ಎಚ್‌ಸಿ ದೇವರಾಜ್, ಬಂಟ್ವಾಳ ಸಂಚಾರ ಠಾಣೆಗೆ ವರ್ಗಾವಣೆಗೊಂಡ ಪಿಸಿ ಶಿವಾನಂದ ಕೆ, ಪಿಸಿ ಸಂಗೊಳ್ಳಿ, ಡಬ್ಲ್ಯೂಪಿಸಿ ಗಾಯತ್ರಿ, ೫ ವರ್ಷ ಕಾಲ ಕರ್ತವ್ಯ ಸಲ್ಲಿಸಿ ಮಂಗಳೂರು ಸೆನ್‌ಗೆ ವರ್ಗಾವಣೆಗೊಂಡ ಪಿಸಿ ಹರ್ಷಿತ್ ಹಾಗೂ ಮೂರು ತಿಂಗಳ ಕಾಲ ಕರ್ತವ್ಯ ಸಲ್ಲಿಸಿ ಚಿಕ್ಕಮಗಳೂರು ಬಾಲೂರು ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಶ್ರೀನಾಥ್ ರೆಡ್ಡಿಯವರಿಗೆ ಸನ್ಮಾನದೊಂದಿಗೆ ಬೀಳ್ಕೊಡುಗೆ ಮಾಡಲಾಯಿತು. ಸಭಾಧ್ಯಕ್ಷತೆ ವಹಿಸಿದ್ದ ರವಿಯವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಠಾಣೆಯ ಪ್ರವೀಣ್ ರೈ ಸ್ವಾಗತಿಸಿ, ವೆಂಕಪ್ಪ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here