ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎ.ಎಂ ಅಕ್ಕಮ್ಮ ಅವರಿಗೆ ನೈತ್ತಾಡಿ ಅಂಗನವಾಡಿ ಕೇಂದ್ರದಲ್ಲಿ ಸನ್ಮಾನ

0

ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎ.ಎಂ ಅಕ್ಕಮ್ಮ ಅವರಿಗೆ ಪ್ರಿಯ ಸ್ತ್ರೀ ಶಕ್ತಿ ಸಂಘ ಮತ್ತು ಪ್ರೀತಿ ಸ್ತ್ರೀ ಶಕ್ತಿ ಸಂಘ ಹಾಗೂ ನೈತ್ತಾಡಿ ಅಂಗನವಾಡಿ ಬಾಲವಿಕಾಸ ಸಮಿತಿ ವತಿಯಿಂದ ನೈತ್ತಾಡಿ ಅಂಗನವಾಡಿ ಕೇಂದ್ರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮುಂಡೂರು ಗ್ರಾ.ಪಂ ಸದಸ್ಯೆ ದೀಪಿಕಾ ಚಂದ್ರಶೇಖರ್, ನೈತ್ತಾಡಿ ಅಂಗನವಾಡಿಯ ಶಿಕ್ಷಕಿ ಬೇಬಿ, ಸಹಾಯಕಿ ಶೃತಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇಷ್ಮಾ ಚೆನ್ನಪ್ಪ ಗೌಡ ಹಾಗೂ ಹಾಗೂ ಬಾಲ ವಿಕಾಸ ಸಮಿತಿ ಸದಸ್ಯರು, ಪ್ರಿಯ ಸ್ತ್ರೀ ಶಕ್ತಿ ಸಂಘ, ಪ್ರೀತಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here