ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಉಚಿತ ದಂತ ಚಿಕಿತ್ಸಾ ತಪಾಸಣಾ ಶಿಬಿರ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಕೆವಿಜಿ ಡೆಂಟಲ್ ಕಾಲೇಜು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರವು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಉದ್ಘಾಟಿಸಿ ಶುಭಹಾರೈಸಿದರು. ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ , ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳನ್ನು ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಕೆ ವಿ ಜಿ ಡೆಂಟಲ್ ಕಾಲೇಜು ಆಸ್ಪತ್ರೆಯ ಉಪನ್ಯಾಸಕಿ ಡಾ. ಪೃಥ್ವಿ, ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ , ಹಿರಿಯ ಶಿಕ್ಷಕಿ ಹೇಮಾ ನಾಗೇಶ್ ರೈ ಉಪಸ್ಥಿತರಿದ್ದರು .ವಿದ್ಯಾರ್ಥಿ ಧನುಷ್ ಕೆ ಪ್ರಾರ್ಥಿಸಿದರು. ಮುಖ್ಯಗುರು ಸರಸ್ವತಿ ಎಂ ಸ್ವಾಗತಿಸಿದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು. ಶಿಕ್ಷಕಿ ಅನಿತಾ ಜೆ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here