ಪಾಣಾಜೆ ಸತ್ಯನಾರಾಯಣ ಅಡಿಗರಿಗೆ ‘ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ’ ಪ್ರಶಸ್ತಿ 

0

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಕೊಡಮಾಡುವ 2022-23 ನೇ ಸಾಲಿನ ‘ಪುತ್ತೂರು ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ’ ಪ್ರಶಸ್ತಿಗೆ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗರವರು ಆಯ್ಕೆಯಾಗಿದ್ದಾರೆ‌.

ಕುಲಶೇಖರ ದ.ಕ. ಹಾಲು ಒಕ್ಕೂಟದ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್, ಜಯರಾಮ ರೈ ಬಳಜ್ಜ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಕೆ. ಅಶೋಕ್ ಪ್ರಶಸ್ತಿ ಪ್ರದಾನ ಮಾಡಿದರು. ಅಡಿಗರು ಪಾಣಾಜೆ ಡೈರಿಯಲ್ಲಿ ಕಳೆದ 30 ವರ್ಷಗಳಿಂದ ಕೃತಕ ಗರ್ಭಧಾರಣಾ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ..

LEAVE A REPLY

Please enter your comment!
Please enter your name here